ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್​​ಪಿ ಆತ್ಮಹತ್ಯೆ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್​​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (
70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್​​ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು.

- Advertisement - 

ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ಜರುಗಿದೆ.

 

- Advertisement - 

 

Share This Article
error: Content is protected !!
";