ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಯೋತ್ಪಾದನೆ ವಿರುದ್ಧ ಭಾರತ ಮತ್ತು ರಷ್ಯಾ ಒಟ್ಟಾಗಿ ಹೋರಾಟ ನಡೆಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ನವದೆಹಲಿಯ ಹೈದರಾಬಾದ್ಹೌಸ್ನಲ್ಲಿ ದ್ವಿಪಕ್ಷೀಯ ಸಭೆ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಶುಕ್ರವಾರ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮೋದಿ ಅವರು ಹೇಳಿದರು.
ಭಯೋತ್ಪಾದನೆ ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತಿದೆ ಮತ್ತು ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ ನಂಟಿದೆ ಎಂಬ ಆರೋಪದ ನಂತರ ಅದು ಬಲವಾಗಿ ಪ್ರತಿಕ್ರಿಯಿಸಿದೆ. ಭಯೋತ್ಪಾದಕ ದಾಳಿ ಖಂಡಿಸಿದ ಮಾಸ್ಕೋ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತದೊಂದಿಗೆ ಕೈಜೋಡಿಸುವುದಾಗಿ ಹೇಳಿದರು.
ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯ ಮತ್ತು ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರದ ಕೆಲವು ಭಾಗಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಷನ್ ಸಿಂದೂರ್ಅನ್ನು ಮಾಸ್ಕೋ ಬೆಂಬಲಿಸಿತ್ತು.
ಕಳೆದ ಎಂಟು ದಶಕಗಳಲ್ಲಿ, ಜಗತ್ತು ಹಲವಾರು ಏರಿಳಿತಗಳನ್ನು ಕಂಡಿದೆ.

ಮಾನವೀಯತೆ ಅನೇಕ ಸವಾಲುಗಳು ಮತ್ತು ಬಿಕ್ಕಟ್ಟುಗಳನ್ನು ಎದುರಿಸಬೇಕಾಯಿತು. ಇದೆಲ್ಲದರ ನಡುವೆಯೂ, ಭಾರತ-ರಷ್ಯಾ ಸ್ನೇಹವು ಧ್ರುವ ನಕ್ಷತ್ರದಂತೆ ಸ್ಥಿರವಾಗಿ ಉಳಿದಿದೆ. ಪರಸ್ಪರ ಗೌರವ ಮತ್ತು ಆಳವಾದ ನಂಬಿಕೆಯಲ್ಲಿ ಬೇರೂರಿರುವ ಈ ಸಂಬಂಧಗಳು ಯಾವಾಗಲೂ ಕಾಲದ ಪರೀಕ್ಷೆಯಲ್ಲಿ ನಿಂತಿವೆ ಎಂದು ಮೋದಿ ಹೇಳಿದರು.
ಮೋದಿ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ ಎಂದು ಹೇಳಿದರು.
ರಷ್ಯಾ ನಿಯೋಗಕ್ಕೆ ಆತ್ಮೀಯ ಮತ್ತು ಆತಿಥ್ಯದ ಸ್ವಾಗತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿ ಹಾಗೂ ಭಾರತದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಭೋಜನಕೂಟದಲ್ಲಿ ಪ್ರಧಾನಿ ಮೋದಿ ಅವರೊಂದಿಗಿನ ನನ್ನ ಮಾತುಕತೆಗಳು ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗೆ ಬಹಳ ಸಹಾಯಕವಾಗಿದ್ದವು ಎಂದು ಪುಟಿನ್ ಇದೇ ಸಂದರ್ಭದಲ್ಲಿ ತಿಳಿಸಿದರು.

