ಹೂಡಿಕೆಗೆ ಉತ್ತೇಜಿಸಿ, ಉದ್ಯೋಗ ಸೃಷ್ಟಿಗೆ ಯೋಜನೆ ಜಾರಿ-ಎಂಬಿಪಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಹೂಡಿಕೆಗಳನ್ನು ಉತ್ತೇಜಿಸಿ, ಉದ್ಯೋಗ ಸೃಷ್ಟಿಗೆ ನೆರವಾಗುವ ಕ್ರಮಗಳನ್ನು ಜಾರಿಗೆ ತರುವ ದಿಸೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಕ್ರಿಯೆ ನಿರಂತರವಾಗಿ ಮುಂದುವರೆದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಲಾಯಿತು. ಹಲವು ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆದು,

- Advertisement - 

ಕೈಗಾರಿಕಾ ವಲಯಕ್ಕೆ ಹೊಸ ಬಲ ತುಂಬುವ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಸಚಿವ ಪಾಟೀಲ್ ತಿಳಿಸಿದರು. ಸಭೆಯಲ್ಲಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";