ಭರಮಸಾಗರದಲ್ಲಿ ರೈತರಿಗೆ ಹೊರಾಂಗಣ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ಡಿ.23ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಎದುರಿಗಿರುವ

ಮಾರುಕಟ್ಟೆ ಆವರಣದ ಗೋದಾಮಿನಲ್ಲಿ ಜಿಲ್ಲೆಯ ಕೃಷಿಕರಿಗೆ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೆÇಸ್ಟ್ ತಯಾರಿಕೆಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

- Advertisement - 

ತರಬೇತಿ ಕಾರ್ಯಕ್ರಮದಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್‍ನ  ತುಮಕೂರಿನ ತಾಂತ್ರಿಕ ಅಧಿಕಾರಿಯಾದ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೆÇಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.

ನಂತರ ಕೋಗುಂಡೆ ಗ್ರಾಮದ ರೈತರಾದ ಲೋಕೇಶ್ ಎಚ್ ಸಿ ಇವರು ಅಡಿಕೆ ಸಿಪ್ಪೆಯಿಂದ ಕಾಂಪೆÇೀಸ್ಟ್ ತಯಾರಿಸಿ ಬಳಸುತ್ತಿರುವ ತಮ್ಮ ಅನುಭವವನ್ನು ತಿಳಿಸುವರು. ಆದ ಪ್ರಯುಕ್ತ ಆಸಕ್ತ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಸದರಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

- Advertisement - 

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಕೋರಿದೆ.

 

Share This Article
error: Content is protected !!
";