ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2026ರ ಜನವರಿ 16ರಂದು ಬೆಳಿಗ್ಗೆ 11ಕ್ಕೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ.
ಖಾಸಗಿ ಪ್ರವರ್ತಕರು ಸಲ್ಲಿಸಿರುವ ರಹದಾರಿ ವರ್ಗಾವಣೆ, ರಹದಾರಿ ವೆತ್ಯೇಯ ಹಾಗೂ ಇನ್ನೀತರ ವಿಷಯಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಪ್ರಯುಕ್ತ ಸಂಬಂಧಪಟ್ಟ ಅರ್ಜಿದಾರರಾಗಲಿ ಅಥವಾ ತಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕವಾಗಲಿ ಸಭೆಗೆ ಹಾಜರಾಗಬೇಕು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಭರತ್ ಎಂ.ಕಾಳೇಸಿಂಘೆ ತಿಳಿಸಿದ್ದಾರೆ.

