ಕೊರಗ ಸಮುದಾಯಕ್ಕೆ ನೂತನ ಮನೆ ವಿತರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಕುಂದಾಪುರ:
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್  ಬೆಂಗಳೂರು ಇವರ ವತಿಯಿಂದ

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿನ ಕೊರಗರ ಕಾಲೋನಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 ಸುಂದರ ಮನೆಗಳ ಗೃಹಪೂಜೆ ಹಾಗೂ

- Advertisement - 

ಲೋಕಾರ್ಪಣೆ ಕಾರ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ  ಸಾನಿಧ್ಯದಲ್ಲಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ  ಬಿ.ಎಲ್. ಸಂತೋಷ್ ಅವರ ಉಪಸ್ಥಿತಿಯಲ್ಲಿ ಜನಸೇವಾ ಸಂಕಲ್ಪದೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ  ಬಿ.ವೈ ರಾಘವೇಂದ್ರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ  ಗುರುರಾಜ ಗಂಟಿಹೊಳೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಯಶ್ಪಾಲ್ ಸುವರ್ಣ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕರು, ಪದಾಧಿಕಾರಿಗಳು, ದಾನಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";