ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಹಲವಾರು ದಶಕಗಳಿಂದ ಕನ್ನಡಪರ ಚಟುವಟಿಕೆಯಲ್ಲಿ ಸಕ್ರಿಯಾವಾಗಿ ಭಾಗವಹಿಸಿ, ಕೊರ್ಲಕುಂಟೆ ಗ್ರಾಮದಲ್ಲಿ ಕನ್ನಡ ಸಾಂಸ್ಕೃತಿಕ ಮತ್ತು ಗ್ರಾಮಾಭಿವೃದ್ದಿ ಸಂಸ್ಥೆ ಸ್ಥಾಪಿಸಿ ಹಲವಾರು ಕವಿಗೋಷ್ಠಿಗಳಲ್ಲಿ
ಭಾಗವಹಿಸಿ ಕಥೆ, ಕವನಗಳನ್ನು ರಚಿಸಿ, ಕನ್ನಡಪರ ನಿಲುವಿನ ಬಗ್ಗೆ ಜಾಗೃತಿ ಮೂಡಿಸಿದ ವರದಿಗಾರ ಕೊರ್ಲಕುಂಟೆ ತಿಪ್ಪೇಸ್ವಾಮಿಯವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯರನ್ನಾಗಿ ಪ್ರಾಧಿಕಾರದ ಅಧ್ಯಕ್ಷೆ ಮಾನಸ ಆಯ್ಕೆ ಮಾಡಿ ಅರ್ಹತಾ ಪತ್ರ ನೀಡಿದ್ದಾರೆ.
ಜಿಲ್ಲಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಕೊರ್ಲಕುಂಟೆ ತಿಪ್ಪೇಸ್ವಾಮಿಗೆ ಕಸಬಾಹೋಬಳಿ ತೊಗರಿ, ಶೇಂಗಾ ಬೆಳಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರೊ.ಸಿ.ಶಿವಲಿಂಗಪ್ಪ, ಮೋದೂರು ತೇಜ, ತಿಪ್ಪಣ್ಣಮರಿಕುಂಟೆ, ಎಚ್.ಲಂಕೇಶ್, ಶಿಕ್ಷಕರ ಕೆ.ಎಸ್.ಶ್ರೀಕಾಂತ್, ಸಿ.ಜಿ.ತಿಪ್ಪೇಸ್ವಾಮಿ ಮುಂತಾದವರು ಅಭಿನಂದನೆ ಸಲ್ಲಿಸಿದ್ದಾರೆ.

