ಅನಧಿಕೃತ ಮನೆಗಳ ತೆರವು ಸಂತ್ರಸ್ತರಿಗೆ ಬದಲಿ ವ್ಯವಸ್ಥೆ ಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿದೆ.

2021ರಿಂದಲೂ ಈ ಪ್ರದೇಶದಲ್ಲಿನ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ಎಕರೆ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದ್ದವು.

- Advertisement - 

ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು ಸೆಕ್ರೆಟರಿಗಳೊಂದಿಗೆ ಮಾತನಾಡಿ, ತೆರವುಗೊಂಡ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

- Advertisement - 

ಅವರಲ್ಲಿ ಹೆಚ್ಚಿನವರು ವಲಸಿಗರು. ಬೇರೆ ಕಡೆಯಿಂದ ಬಂದಿರುವವರು. ನಾವು ಮಾನವೀಯತೆ ದೃಷ್ಟಿಯಿಂದ ಅವರಿಗೆ ಪರ್ಯಾಯವಾಗಿ ಜಾಗ ನೀಡಿ, ವಸತಿ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Share This Article
error: Content is protected !!
";