ಪ್ರಬಂಧ ಸ್ಪರ್ಧಾ ವಿಜೇತರಾದವರಿಗೆ ನಗದು ಬಹುಮಾನ ವಿತರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಆರ್.ಎಂ.ಸಿ.ಯಾರ್ಡ್‌ನಲ್ಲಿರುವ ನವ ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ನಗರದ ೨೬ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನು ಎಂ. ಪ್ರಥಮ, ಪೂಜಾ ಸಿ. ದ್ವಿತೀಯ, ರುಕ್ಸಾನಾಭಾನು ತೃತೀಯ ಬಹುಮಾನ ಪಡೆದಿದ್ದಾರೆ.

- Advertisement - 

ಪ್ರಥಮ ಬಹುಮಾನವಾಗಿ ಐದು ಸಾವಿರ ರೂ. ದ್ವಿತೀಯ ಬಹುಮಾನ ಮೂರು ಸಾವಿರ ರೂ. ಹಾಗೂ ತೃತೀಯ ಬಹುಮಾನ ಎರಡು ಸಾವಿರ ರೂ.ಗಳನ್ನು ವಿಜೇತರಿಗೆನೀಡಲಾಯಿತೆಂದು ನವ ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ಜಯಲಕ್ಷ್ಮಿ ಎನ್. ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";