ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ಬೆಂಗಳೂರಿನಲ್ಲೇ 10 ಹೆರಿಗೆ ಆಸ್ಪತ್ರೆಗಳು ಬಂದ್ಮಾಡಿರುವುದು ಸುಳ್ಳೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಆರೋಗ್ಯ ಇಲಾಖೆಯನ್ನು ಹಂತ ಹಂತವಾಗಿ ಬಲಹೀನಗೊಳಿಸುತ್ತಿರುವ ಅಸಮರ್ಥ ಸಚಿವರೇ, ಒಂದೂ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುವುದಿಲ್ಲ ಎಂದು ಸುಳ್ಳು ಹೇಳಿ, ಈಗ ಸಾರ್ವಜನಿಕವಾಗಿ ಬೆತ್ತಲಾಗಿದ್ದೀರಿ.
ಹೀಗೆ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಿದರೇ, ಬಡವರು ಚಿಕಿತ್ಸೆಗಾಗಿ ಎಲ್ಲಿಗೆ ಹೋಗಬೇಕು. ಲಕ್ಷಾಂತರ ರೂ. ವೆಚ್ಚ ಭರಿಸಲು ಅವರಿಂದ ಸಾಧ್ಯವೇ ? ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೂ ಸಹ ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ.
ಜನ ವಿರೋಧಿ ಕಾಂಗ್ರೆಸ್ಸರ್ಕಾರದ ಹೊಣೆಗೇಡಿತನ ಹಾಗೂ ಭಂಡತನ ರಾಜ್ಯದ ಜನರ ಮುಂದೆ ಬಟ ಬಯಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

