ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಲಾಯಿತು.
ಚಿತ್ರದುರ್ಗ ಜಿಲ್ಲೆಯಿಂದ ಆಯ್ಕೆಯಾದ ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಒಕ್ಕಲಿಗ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಧ್ಯಕ್ಷ ಬೇತೂರು ಪಾಳ್ಯ ಡಾ.ಜೆ.ರಾಜು ಅವರು ಡಿಸಿಎಂ ಅವರಿಗೆ ಹೂಗುಚ್ಚ ನೀಡಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

