ಶಿವರಾಜ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮೂಡಲಗುಂಡ ಗ್ರಾಮದ ಅಯ್ಯಪ್ಪ ಮತ್ತು ಶಿವಮ್ಮ ದಂಪತಿಯ ಹಿರಿಯ ಪುತ್ರ ಶಿವರಾಜ ರವರು ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಿವರಾಜ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಸಮತಾ ಬಿ. ದೇಶಮಾನೆ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮಕ್ಕಳ ಅಪೌಷ್ಟಿಕತೆ ಕುರಿತು: ಒಂದು ಸಮಾಜಶಾಸ್ತ್ರೀಯ ಅಧ್ಯಯನ” (ವಿಶೇಷವಾಗಿ ರಾಯಚೂರು ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement - 

 

- Advertisement - 
Share This Article
error: Content is protected !!
";