ಒಂದು ದೇಶ ಒಂದು ಚುನಾವಣೆ ಉತ್ತಮ ರಾಷ್ಟ್ರದ ಶ್ರೇಷ್ಠ ಕಲ್ಪನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಂದು ದೇಶ ಒಂದು ಚುನಾವಣೆ ಉತ್ತಮ ರಾಷ್ಟ್ರದ ಶ್ರೇಷ್ಠ ಕಲ್ಪನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಒಂದು ದೇಶ  ಒಂದು ಚುನಾವಣೆ ಕುರಿತ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಅವು ಮಾತನಾಡಿದರು.

ದೇಶದ ನಾಗರೀಕರ ಬಹು ವರ್ಷಗಳ ಆಶಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಿಸಿ ಸುಭದ್ರ ಭಾರತ ಕಟ್ಟುವ ನಿಟ್ಟಿನಲ್ಲಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಚುನಾವಣಾ ವೆಚ್ಚದಲ್ಲಿ ಭಾರಿ ಇಳಿಕೆಯಾಗಲಿದ್ದು, ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಕಡಿಮೆಯಾಗುತ್ತದೆ. ರಾಜಕೀಯ ಪಕ್ಷಗಳೂ ಚುನಾವಣೆ ಬಿಟ್ಟು, ಆಡಳಿತದತ್ತ ಗಮನಕೊಡಲು ಸಾಧ್ಯವಾಗುತ್ತದೆ.

ಪದೇ ಪದೇ ಚುನಾವಣೆ ನಡೆಯುವುದರಿಂದ ಜನರಿಗೆ ಆಗುವ ತೊಂದರೆಗಳ ನಿವಾರಣೆ ಸೇರಿದಂತೆ ಆಡಳಿತಾತ್ಮಕ ಮತ್ತು ಭದ್ರತಾ ಪಡೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷೆ ಮಾಳವಿಕಾ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್, ವಿಧಾನ ಪರಿಷತ್‌ಸದಸ್ಯ ಕೆ. ಎಸ್.‌ನವೀನ್‌, ಪ್ರಕೋಷ್ಠಗಳ ರಾಜ್ಯ ಸಂಚಾಲಕ ದತ್ತಾತ್ರಿ, ರಾಜ್ಯ ಕಾರ್ಯದರ್ಶಿಗಳಾದ  ತಮ್ಮೇಶ್‌ಗೌಡ, ಶರಣು ತಳ್ಳೀಕೇರಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 

Share This Article
error: Content is protected !!
";