ಸ್ನೇಹಮಯಿ ಕೃಷ್ಣ ಹಣಿಯಲು ಸಿದ್ದರಾಮಯ್ಯ ಬೆಂಬಲಿಗರಿಂದ ಸುಳ್ಳು ಕೇಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ)ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಪೊಲೀಸ್ ಬಲ ಪ್ರಯೋಗಿಸಿ ಇಂತಹ ಆಧಾರ ರಹಿತ ದೂರುಗಳನ್ನು ದಾಖಲಿಸಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರೊಬ್ಬರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನವರ ಹತಾಶೆಯ ಎಲ್ಲೆ ಮೀರಿದ ದೌರ್ಜನ್ಯವನ್ನು ಪ್ರತಿಬಿಂಬಿಸುತ್ತದೆ.

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ. ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಸುಳ್ಳು ದೂರು, ಬೆದರಿಕೆಗಳು ಮುಂದುವರೆದಲ್ಲಿ ಸಾಮಾಜಿಕ ಕಾರ್ಯಕರ್ತರ ರಕ್ಷಣೆಗೆ ಬಿಜೆಪಿ ನಿಲ್ಲಲಿದೆ ಎಂದು ಭರವಸೆ ನೀಡಿದೆ.

 

Share This Article
error: Content is protected !!
";