ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನವರಿ 15ರಂದು ನಡೆಯುವ ಮಕರ ಸಂಕ್ರಾಂತಿಯ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ.
ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ.
ಇದರಂತೆ ದೇಗುಲದಲ್ಲಿ ವಿಶೇಷ ಪೂಜೆಗಳು ಆರಂಭವಾಗಿ, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಯಿತು.
ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಸಾಕ್ಷಿಯಾಗಿದೆ.

