ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂ ಹೋಗಲು ಅನಮತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿರುವ ಆರೋಪಿ ನಟ ದರ್ಶನ್  ವಿರುದ್ಧ ಸುಪ್ರೀಂ ಕೋರ್ಟ್ ಹೋಗಲು ರಾಜ್ಯ ಸರ್ಕಾರ ಅನುಮಿತಿ ನೀಡಿದೆ.

ಕೊಲೆ ಆರೋಪಿ ದರ್ಶನ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಹೈಕೋರ್ಟ್​ ಬೆನ್ನು ನೋವಿನ ಚಿಕಿತ್ಸೆಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು.

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಅದಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಎ2 ಆರೋಪಿ ಆಗಿದ್ದಾರೆ. ದರ್ಶನ್ ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು.

ಈಗ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚಾಗುವ ಸಾಧ್ಯತೆ ಇದೆ. ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ.

ಈ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಸಮಯಾವಕಾಶ ಕೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

Share This Article
error: Content is protected !!
";