ಐಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಮಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧಿಸಿರುವುದಲ್ಲದೆ 351 ಗ್ರಾಂ ತೂಕದ 26 ಲಕ್ಷದ 98 ಸಾವಿರ  ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

- Advertisement - 

ಹನುಮಂತ ಅಲಿಯಾಸ್ ಬಳ್ಳಾರಿ ಹನುಮಂತ ಬಂಧಿತ ಆರೋಪಿ. ಕರ್ನಾಟಕ ಮತ್ತು ಆಂದ್ರ ರಾಜ್ಯದಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.

- Advertisement - 

ಐಮಂಗಲ ಬಸ್ ನಿಲ್ದಾಣದ ಬಳಿ ಅನುಮಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದಾಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. DYSP ಶಿವಕುಮಾರ್, CPI ಎನ್. ಗುಡ್ಡಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

- Advertisement - 

 

Share This Article
error: Content is protected !!
";