ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭದ್ರಾ ಪಂಪ್ ಹೌಸ್ ನಿಂದ ವಾಣಿ ವಿಲಾಸ ಸಾಗರಕ್ಕೆ ಲಿಫ್ಟ್ ಮಾಡುತ್ತಿರುವ ನೀರು ಮತ್ತು ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನಿರೀಕ್ಷೆಗೂ ಮೀರಿದ ನೀರಿನ ಒಳ ಹರಿವು ಹೆಚ್ಚಳವಾಗಿದೆ.
ಅಕ್ಟೋಬರ್-20ರಂದು ಸೋಮವಾರ ಬೆಳಿಗ್ಗೆ 8 ಗಂಟೆ ವೇಳೆಗೆ 14910 ಕ್ಯೂಸೆಕ್ ಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. 130.70 ಅಡಿಗೆ ಏರಿಕೆಯಾಗಿದೆ. ಅಲ್ಲದೆ ಕೋಡಿ ಮೂಲಕ 914 ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ.
ಸಾವಿರಾರು ಸಂಖ್ಯೆಯಲ್ಲಿ ಕೋಡಿ ಹರಿಯುತ್ತಿರುವ ವೇದಾವತಿ ನೀರು ನೋಡಲು ರಾಜ್ಯದ ವಿವಿಧ ಭಾಗಗಳಿಂದ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

