ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನದ ಆಫರ್ ಬಂದಿತ್ತು ಎನ್ನುವ ಹೇಳಿಕೆ ಕುರಿತು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ ಅಲ್ಲಗಳೆದಿದ್ದಾರೆ.
ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಸಿದ್ದರಾಮಯ್ಯನವರಿಗೆ ನೀಡಿದ ಬೆದರಿಕೆ ಸಂದೇಶವಷ್ಟೇ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಯಾರು ಕರೆ ಮಾಡಿದ್ದರು, ಯಾವಾಗ ಕರೆ ಮಾಡಿದ್ದರು, ಯಾವ ನಂಬರ್ನಿಂದ ಕರೆ ಮಾಡಿದ್ದರು ಎಂಬುದನ್ನು ಡಿಕೆಶಿ ಅವರೇ ಬಹಿರಂಗಪಡಿಸಬೇಕು ಎಂದು ಅಶೋಕ್ ಒತ್ತಾಯಿಸಿದರು.
ಈ ಹೇಳಿಕೆಯು ಕಾಂಗ್ರೆಸ್ ನಾಯಕತ್ವಕ್ಕೆ ಸವಾಲು ಹಾಕುವ ಉದ್ದೇಶದಿಂದ ನೀಡಲಾಗಿದೆ. ಒಂದು ವೇಳೆ ಅಧಿಕಾರ ಹಂಚಿಕೆ ಆಗದಿದ್ದರೆ, ಡಿಕೆ ಶಿವಕುಮಾರ್ ಬೇರೆ ದಾರಿ ಹಿಡಿಯಬಹುದು ಎಂಬ ಸಂದೇಶವನ್ನು ಈ ಹೇಳಿಕೆಯ ಮೂಲಕ ನೀಡಿದ್ದಾರೆ. ನವೆಂಬರ್ ತಿಂಗಳಲ್ಲಿ ಕ್ರಾಂತಿ ಆಗುವ ಮುನ್ಸೂಚನೆಗಳನ್ನು ಈ ಘಟನೆಗಳು ನೀಡುತ್ತಿವೆ ಎಂದೂ ಅಶೋಕ್ ಭವಿಷ್ಯ ನುಡಿದಿದ್ದಾರೆ.

