ನಿರಂತರ ಮಳೆ, ತೋಟದಲ್ಲೇ ಕೊಳೆತ ಅಲಂಕಾರಿಕ ಹೂವಿನ ಬೆಳೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕಿನಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ
, ಅಲಂಕಾರಿಕ ಗಿಡಗಳು ಕೊಳೆಯುತ್ತಿವೆ, ಬೆಳೆ ನಾಶದಿಂದ ಕಂಗಲಾದ ರೈತರು ಅಲಂಕಾರಿಗಳ ಹೂಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ. 

- Advertisement - 

  ದೊಡ್ಡಬಳ್ಳಾಪುರ ತಾಲ್ಲೂಕಿನ ನಾರಸಿಂಹನಹಳ್ಳಿಯಲ್ಲಿ ನೆಡೆದಿದ್ದು ನಾರಸಿಂಹನಹಳ್ಳಿಯ ಶ್ರೀಕಾಂತ್ ಮತ್ತು ನರಸೇಗೌಡ ಹೂವಿನ ಬೆಳೆದಿದ್ದರು, ನಿರಂತರ ಮಳೆಯಿಂದಾಗಿ ಕೊಳೆತ ಹೂ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. 

- Advertisement - 

 ಒಂದು ಎಕರೆ ಜಮೀನಿನಲ್ಲಿ ಸುಮಾರು 8 ಲಕ್ಷ ರೂಪಾಯಿ ಹಣ ಖರ್ಚು ಮಾಡಿ ಸಿಲೋಷಿಯ ಜಾತಿಯ ಹೂ ಬೆಳೆದಿದ್ದು.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೇರೆಡೆಗೆ

ಹೂಗಳನ್ನು ರಫ್ತು ಮಾಡಲಾಗುತ್ತಿದ್ದು,ಬಾಂಬೆ, ಕಲ್ಕತ್ತಾ, ಹೈದರಾಬಾದ್, ಮುಂಬೈ ಸೇರಿದಂತೆ ವಿವಿಧ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿತ್ತು ಬೆಳೆ ಸಂಪೂರ್ಣ ಹಾಳಾಗಿದ್ದು ಈ ಕುರಿತು ಸ್ಥಳೀಯ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಯಾರು ಭೇಟಿ ನೀಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.

- Advertisement - 

 

Share This Article
error: Content is protected !!
";