ಕಾಂಗ್ರೆಸ್‌ನ ಮತ್ತೊಂದು ಟೂಲ್‌ಕಿಟ್ ಸುಳ್ಳೆಂದು ಸಾಬೀತು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷವು ಬಿಜೆಪಿ ಮೇಲೆ ಸುಳ್ಳಿನ ಆರೋಪವನ್ನೇ ಹೆಣೆದು ರಾಜ್ಯದ ಜನತೆಯನ್ನು ವಂಚಿಸಿ ಅಧಿಕಾರಕ್ಕೆ ಏರಿತ್ತು. ಇದೀಗ ಒಂದೊಂದೇ ಆರೋಪಗಳು ಸುಳ್ಳೆಂದು ಸಾಬೀತಾಗುತ್ತಿವೆ ಎಂದು ಬಿಜೆಪಿ ತಿಳಿಸಿದೆ.

ಕರ್ನಾಟಕ ಕಾಂಗ್ರೆಸ್ ಪಕ್ಷವು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಸಂಪೂರ್ಣ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿತ್ತು.‌ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರವು ಎಸ್‌ಐಟಿ ರಚಿಸಿತ್ತು.

ಇದೀಗ ಎಸ್ಐಟಿಯು ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ಪುರಾವೆ ಸಿಗದೆ ತನ್ನ ತನಿಖೆಗೆ ಅಂತ್ಯ ಹೇಳಲು ನಿರ್ಧರಿಸಿದೆ. ಈ ಮೂಲಕ ಕಾಂಗ್ರೆಸ್‌ನ ಮತ್ತೊಂದು ಟೂಲ್‌ಕಿಟ್ ಸುಳ್ಳೆಂದು ಸಾಬೀತಾಗಿದೆ ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ಸಿಗರೇ ಇನ್ನಾದರೂ ಸುಳ್ಳಿನ ರಾಜಕೀಯ ಬದಿಗಿಟ್ಟು, ನೈತಿಕ ರಾಜಕಾರಣ ನಡೆಸಿ…! ಎಂದು ಬಿಜೆಪಿ ತಾಕೀತು ಮಾಡಿದೆ.

 

 

Share This Article
error: Content is protected !!
";