ರೈತರಿಗೆ ಗಾಯದ ಆಮೇಲೆ ಮತ್ತೊಂದು ಬರೆ!

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್‌ಫಾರ್ಮರ್‌ಸಮೇತ ಉಚಿತವಾಗಿ ಮೂಲಸೌಕರ್ಯ ಕಲ್ಪಿಸುವ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ  ಸ್ಥಗಿತಗೊಳಿಸಿದ್ದು,

ರೈತರೇ ಸ್ವಂತ ಖರ್ಚಿನಲ್ಲಿ ಕೃಷಿ ಕೊಳವೆ ಬಾವಿಗಳಿಗೆ ವಿದ್ಯುತ್‌ಸಂಪರ್ಕ ಪಡೆಯಬೇಕಾದ ದುಸ್ಥಿತಿ ತಂದಿಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - 

ಕೃಷಿ ಕೊಳವೆ ಬಾವಿಗಳ ವಿದ್ಯುತ್‌ಸಂಪರ್ಕದ ಖರ್ಚು ವೆಚ್ಚದ ಭಾರಕ್ಕೆ ರೈತರು ಬಸವಳಿದಿದ್ದು, ಲಕ್ಷಾಂತರ ರೂ. ಖರ್ಚು ಮಾಡಿ ವಿದ್ಯುತ್‌ಸಂಪರ್ಕ ಪಡೆಯಲು ಸಾಧ್ಯವಾಗದ ಕಾರಣ ಸಣ್ಣಪುಟ್ಟ ರೈತರು ಕೃಷಿಯಿಂದಲೇ ವಿಮುಖರಾಗುತ್ತಿದ್ದಾರೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

 

- Advertisement - 

Share This Article
error: Content is protected !!
";