ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತೊಂದು ಪೂರಕ ಹೆಜ್ಜೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಹೂಡಿಕೆಗಳಿಗೆ ಉತ್ತೇಜನ ನೀಡಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಕ್ರಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಕ್ರಿಯೆ ನಿರಂತರವಾಗಿ ಮುಂದುವರೆದಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

- Advertisement - 

ಹಲವು ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆದು, ಕೈಗಾರಿಕಾ ವಲಯಕ್ಕೆ ಹೊಸ ಬಲ ತುಂಬುವ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಎಂ.ಬಿ ಪಾಟೀಲ್ ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

- Advertisement - 

 

 

 

Share This Article
error: Content is protected !!
";