ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಎನ್.ಆರ್.ಪುರ, ತರೀಕೆರೆ, ಮೂಡಿಗೆರೆ ಮತ್ತು ಶೃಂಗೇರಿ ತಾಲ್ಲೂಕುಗಳಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ. ಕಾರ್ಡ್), ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿಗಳ ಜೆರಾಕ್ಸ್ ಪ್ರತಿ ಮತ್ತು ಪಾಸ್ ಪೋರ್ಟ್ ಅಳತೆಯ ೨ ಭಾವಚಿತ್ರಗಳನ್ನು ಲಗತ್ತಿಸಿ ಜೂನ್ ೬ ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೆರಿ ದೂರವಾಣಿ ಸಂಖ್ಯೆ: ೦೮೨೬೨–೨೨೮೧೭೧, ನಗರದ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೆರಿ ಅಥವಾ ವಿವಿಧೋದ್ದೇಶ ಪುನರ್ವಸತಿ ಕಾರ್ಯಕತ ಕೆ.ಎಸ್. ಮೋಹನ್ ಗೌಡ (ದೂ: ೮೧೦೫೯೮೯೮೮೨), ವಿವಿಧೋದ್ದೇಶ ಪುನರ್ವಸತಿ ಕೇಂದ್ರ, ಕಡೂರು ತಾಲ್ಲೂಕು ಕಾರ್ಯಕರ್ತರಾದ ಶಾನವಾಜ್ ಬಾನು (ದೂ: ೯೦೩೬೯೪೫೨೭೩), ಕೊಪ್ಪ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮೋಹನ್ ಡಿ.ಆರ್, (ದೂ: ೯೪೪೮೨೨೩೨೩೯),
ಎನ್.ಆರ್.ಪುರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಜೆಸ್ಟಿನ್ ಫ್ರಾನ್ಸಿಸ್ (ದೂ: ೭೮೯೯೭೭೮೯೦೩), ತರೀಕೆರೆ/ ಅಜ್ಜಂಪುರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಅಕ್ರಂಬಾಷಾ, (ದೂ: ೯೬೩೨೫೦೩೮೬೭), ಮೂಡಿಗೆರೆ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕತೆ ಚಂಪಾ ಕೆ.ಬಿ (೯೪೮೨೭೪೦೪೬೬), ಶೃಂಗೇರಿ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಸಾಮ್ರಾಟ್ ಜಿ.ಎಲ್ (೯೪೪೯೬೫೮೧೦೮) ಇವರಿಗೆ ಅರ್ಜಿಯನ್ನು ಸಲ್ಲಿಸಲು ಕೋರಿದೆ.