ಮಹಾತ್ಮಫುಲೆ ಅಧ್ಯಯನ ಕೇಂದ್ರದಿಂದ ಉಚಿತ ಬ್ಯಾಂಕಿಂಗ್ ತರಬೇತಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆಯಾದ ಚಿತ್ರದುರ್ಗ ನಗರದ ಮಹಾತ್ಮಫುಲೆ ಅಧ್ಯಯನ ಕೇಂದ್ರದಲ್ಲಿ ಸ್ಥಳೀಯ ಉದ್ಯೋಗಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಕಿಂಗ್ ಹಾಗೂ ಇನ್ನಿತರ ಪರೀಕ್ಷೆಗಳಿಗೆ ಉಚಿತ ತರಬೇತಿ ಶೀಘ್ರ ಪ್ರಾರಂಬಿಸುತಿದ್ದು ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಮಹಾತ್ಮ ಪುಲೆ ಅದ್ಯಯನ ಕೇಂದ್ರದ ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರ ಜೊತೆಗೆ ಈಗಾಗಲೇ ನಮ್ಮ ಕೇಂದ್ರದ ವತಿಯಿಂದ KPSC/KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು ರಿಯಾಯಿತಿಯಲ್ಲಿ ರಾಜ್ಯದ ವಿವಿದ ಭಾಗದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತಿದೆ.

- Advertisement - 

ಇದೇ ಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಬ್ಯಾಂಕಿಂಗ್ IBPS  ಹಾಗೂ RRB, SSC ಮುಂತಾದ ಕೇಂದ್ರದ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಗಳಿಗೆ ಅತೀ ಶೀಘ್ರದಲ್ಲಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.ಆಸಕ್ತಿಯುಳ್ಳ ಅಭ್ಯರ್ಥಿಗಳು ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ನೋಂದಣಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ : ಮಹಾತ್ಮಾಪುಲೆ ಅಧ್ಯಯನ ಕೇಂದ್ರ, #13,ಮೊದಲನೇ ಮುಖ್ಯ ರಸ್ತೆ, ಸರಸ್ವತಿಪುರಂ,ಚಿತ್ರದುರ್ಗ-577501, ಸಂಪರ್ಕಿಸಿ:9242843504, 9740108588, 9972445430.

- Advertisement - 

 

 

Share This Article
error: Content is protected !!
";