ಉಪ ಚುನಾವಣೆಗೆ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ವಾರ್ಡ್ ನಂ:15ರಲ್ಲಿ ತೆರವಾಗಿರುವ ಸ್ಥಾನಕ್ಕೆಉಪ ಚುನಾವಣೆ ಘೋಷಣೆಯಾಗಿದ್ದು ಈ ಕ್ಷೇತ್ರವು ಹಿಂದುಳಿದ ವರ್ಗ(ಎ) ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದ್ದು
, ನಾಮಪತ್ರ ಸಲ್ಲಿಸಲು ಕೊನೆಯ ನವೆಂಬರ್-11 ಆಗಿರುತ್ತದೆ.

 ಆಸಕ್ತಿ ಹೊಂದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯಾಗಲು ಇಚ್ಚಿಸಿದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಯು.ಲಕ್ಷ್ಮಿಕಾಂತ್ ತಿಳಿಸಿದ್ದಾರೆ.

ಚುನಾವಣೆಗೆ ಸ್ಪರ್ಧೆ ಬಯಸುವ ಅಭ್ಯರ್ಥಿಗಳು ನವೆಂಬರ್-6ರೊಳಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅರ್ಜಿ ಪಡೆದು, ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಸಂಬಧಪಟ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಂದ ನಿರ್ದೇಶಿತನಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.

Share This Article
error: Content is protected !!
";