ಕಾಂಗ್ರೆಸ್​ ಶಾಸಕರ ಪಟ್ಟಿ ಕುರಿತು ಕಾಶಪ್ಪನವರನ್ನೇ ಕೇಳಿ-ಪರಮೇಶ್ವರ್

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಕಾಂಗ್ರೆಸ್‌ ಮುಖಂಡ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರು ಶಾಸಕರನ್ನು ಮಾತನಾಡಿಸಿ ಅಭಿಪ್ರಾಯ
, ಕ್ಷೇತ್ರದ ಬಗ್ಗೆ ಹಾಗೂ ಆಡಳಿತದ ಕುರಿತು ಮಾತನಾಡಿಕೊಂಡು ಹೋಗಿದ್ದಾರೆ. ಅವರ ಅನಿಸಿಕೆಗಳನ್ನು ತಿಳಿದುಕೊಂಡು ಆ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

- Advertisement - 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಶಾಸಕರ ಪಟ್ಟಿ ಕುರಿತು ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ, ಅವರನ್ನೇ ಕೇಳಬೇಕು ಎಂದು ಪರಮೇಶ್ವರ್ ತಿಳಿಸಿದರು.
ಕಾಂಗ್ರೆಸ್​ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ
ಅದೆಲ್ಲ ನನಗೆ ಗೊತ್ತಿಲ್ಲ ಎಂದರು.

- Advertisement - 

ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂ ಬಿಟ್ಟರೆ ತುಮಕೂರಿನಲ್ಲಿ ಉತ್ತಮ ಕ್ರೀಡಾಂಗಣವಿದೆ. ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದರು.

ತುಮಕೂರು ನಗರದ ಬಸ್‌ ನಿಲ್ದಾಣಕ್ಕೆ ದಿಢೀರ್‌ ಭೇಟಿ ನೀಡಿದ ಅವರು, ಬಸ್‌ ನಿಲ್ದಾಣದಲ್ಲಿನ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

- Advertisement - 

ನಿಲ್ದಾಣದಲ್ಲಿನ ಹೋಟೆಲ್​​ಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಹೋಟೆಲ್‌ನ ಒಳಗೆ ಸ್ವಚ್ಛತೆ ಕುರಿತು ಖುದ್ದು ಜನರನ್ನು ಭೇಟಿ ಮಾಡಿ ಮಾಹಿತಿ ಪಡೆದ ಸಚಿವರು ಗ್ರಾಹಕರಿಗೆ ಆಹಾರ ವಿತರಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕೆಎಸ್​​ಆರ್​​ಟಿಸಿ ಸಿಬ್ಬಂದಿ ಹಾಗು ಡಿಸಿ ಅವರೊಂದಿಗೆ ಕುಳಿತು ಪರಮೇಶ್ವರ್ ಅವರು ಹೋಟೆಲ್​​ನಲ್ಲಿಯೇ ಕಾಫಿ ಕುಡಿದರು.

ನಂತರ ಬಸ್‌ ನಿಲ್ದಾಣದ ಬಳಿ ಇದ್ದ ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು. ಸಾರ್ವಜನಿಕರಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚಿಸಿದರು. ಈ ವೇಳೆ, ಪೊಲೀಸರು ಸಣ್ಣ ತಪ್ಪುಗಳಾದ ದಂಡ ವಿಧಿಸುವುದನ್ನು ನಿಲ್ಲಿಸಬೇಕು ಎಂದು ಆಟೋ ಚಾಲಕರು ಗೃಹ ಸಚಿವರಿಗೆ ಮನವಿ ಮಾಡಿದರು.

 

 

Share This Article
error: Content is protected !!
";