ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಸ್ಟ್ರೇಲಿಯಾ ದೇಶದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ(HillaryMcGeachy) ಅವರು ಬುಧವಾರ ಬೆಂಗಳೂರಿನ ಖನಿಜ ಭವನದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರನ್ನು ಭೇಟಿಮಾಡಿ ಚರ್ಚಿಸಿದರು.
ಈ ವೇಳೆ ಆಸ್ಟ್ರೇಲಿಯಾ ಮತ್ತು ಕರ್ನಾಟಕದ ನಡುವಿನ ದ್ವಿಪಕ್ಷೀಯ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳು ಹಾಗೂ ಆರೋಗ್ಯ, ಶಿಕ್ಷಣ ಮತ್ತು ಸುಸ್ಥಿರ ಅಭಿವೃದ್ಧಿ ಕ್ಷೇತ್ರಗಳಲ್ಲಿ ಸಹಕಾರದ ಸಾಧ್ಯತೆಗಳನ್ನು ಕುರಿತು ಚರ್ಚಿಸಿದೆವು ಎಂದು ಎಂ.ಬಿ ಪಾಟೀಲ್ ತಿಳಿಸಿದರು.

