ಆಯುಷ್ಮಾನ್ ಭಾರತ್‌ ದಿವಸ್ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುಷ್ಮಾನ್ ಭಾರತ್ ದಿನ” ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಪ್ರಧಾನಮಂತ್ರಿ ಜನ್‌ಆರೋಗ್ಯ ಯೋಜನೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯುಷ್ಮಾನ್ ಭಾರತ್‌ದಿವಸ್ ಅನ್ನು ಆಚರಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

5 ಲಕ್ಷ ರೂಗಳ ವರೆಗಿನ ಉಚಿತ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸಿ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹೆಮ್ಮೆಯ ಪ್ರಧಾನಿ  ನರೇಂದ್ರ ಮೋದಿ ಅವರ ಸರ್ಕಾರದ ಆಯುಷ್ಮಾನ್ ಯೋಜನೆಯು ಬಡ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿದೆ ಎಂದು ಅವರು ತಿಳಿಸಿದರು.

ಹಣವಿಲ್ಲದ ಕಾರಣಕ್ಕೆ ಆರೋಗ್ಯ ಸೇವೆಗಳಿಂದ ವಂಚಿತರಾಗುವ ಅಥವಾ ಆರೋಗ್ಯ ಸಮಸ್ಯೆಯ ಕಾರಣಕ್ಕೆ ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವ ಸಂದಿಗ್ಧ ಸ್ಥಿತಿಯನ್ನು ದೂರಗೊಳಿಸುತ್ತಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share This Article
error: Content is protected !!
";