ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಸ್ಥಾಪಕ ದಾದಾ ಸಾಹೇಬ್ ಡಾ.ಎನ್.ಮೂರ್ತಿರವರ ಐದು ದಶಕಗಳ ಸುಧೀರ್ಘ
ಸಮಾಜಮುಖಿ ಹೋರಾಟದ ಸ್ಮರಣೆಗಾಗಿ ಬೀದರ್ನ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಭವನದಲ್ಲಿ ನಡೆದ ಬುದ್ದ ಧಮ್ಮ ದೀಕ್ಷಾ ದಿನಾಚರಣೆ ಮತ್ತು ಅಭಿನಂದನಾ ಸಮಾರಂಭದಲ್ಲಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ಎಸ್.ಎನ್.ವಿಶ್ವನಾರಾಯಣಮೂರ್ತಿರವರಿಗೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ರಂಗಗಳಲ್ಲಿನ ನೂರು ಮಂದಿ ಸಾಧಕರುಗಳನ್ನು ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

