ಎತ್ತಿನ ಗಾಡಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಎತ್ತಿನ ಗಾಡಿಗೆ(ಬಂಡಿಗೆ) ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಸಂಚರಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಜರುಗಿದೆ.

ಶಶಿಕುಮಾರ ಉಪ್ಪಾರ(25), ಆಕಾಶ ಬಿರಾದಾರ(23) ಮತ್ತು ದರ್ಶನ(23) ಮೃತ ದುರ್ದೈವಿಗಳಾಗಿದ್ದಾರೆ.
ಮತ ಮೂವರ ಪೈಕಿ ಇಬ್ಬರು ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದು ಮೂರು ಜನ ಸೇರಿ ಬೈಕ್​ನಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೃತರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಆಕಾಶ ಮತ್ತು ದರ್ಶನ ಮೂರನೇ ವರ್ಷದ ಬಿಎಸ್ಸಿ  ಓದುತ್ತಿದ್ದರು. ಶಶಿಕುಮಾರ ಹನುಮನಮಟ್ಟಿ ಗ್ರಾಮದಲ್ಲಿ ಹೋಟೆಲ್​ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
error: Content is protected !!
";