ಎತ್ತಿನ ಗಾಡಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಎತ್ತಿನ ಗಾಡಿಗೆ(ಬಂಡಿಗೆ) ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಸಂಚರಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಜರುಗಿದೆ.

- Advertisement - 

ಶಶಿಕುಮಾರ ಉಪ್ಪಾರ(25), ಆಕಾಶ ಬಿರಾದಾರ(23) ಮತ್ತು ದರ್ಶನ(23) ಮೃತ ದುರ್ದೈವಿಗಳಾಗಿದ್ದಾರೆ.
ಮತ ಮೂವರ ಪೈಕಿ ಇಬ್ಬರು ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದು ಮೂರು ಜನ ಸೇರಿ ಬೈಕ್​ನಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

- Advertisement - 

ಮೃತರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಆಕಾಶ ಮತ್ತು ದರ್ಶನ ಮೂರನೇ ವರ್ಷದ ಬಿಎಸ್ಸಿ  ಓದುತ್ತಿದ್ದರು. ಶಶಿಕುಮಾರ ಹನುಮನಮಟ್ಟಿ ಗ್ರಾಮದಲ್ಲಿ ಹೋಟೆಲ್​ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 
Share This Article
error: Content is protected !!
";