ಹಿಂಬದಿಯಿಂದ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಸವಾರ ಸ್ಥಳದಲ್ಲೇ ಸಾವು

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಸಾಣೀಕೆರೆ ಗ್ರಾಮದ
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲಮರಹಳ್ಳಿಯಿಂದ ಚಳ್ಳಕೆರೆ ಕಡೆಗೆ ಟಿವಿಎಸ್ ಎಕ್ಸಲ್‌ನಲ್ಲಿ ಆಗಮಿಸುತ್ತಿದ್ದ ತರಕಾರಿ ವ್ಯಾಪಾರಿ ವೀರಭದ್ರಪ್ಪ(೪೫) ಎಂಬುವವರಿಗೆ ಹಿರಿಯೂರು ಕಡೆಯಿಂದ ಚಳ್ಳಕೆರೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವೀರಭದ್ರಪ್ಪನವರ ತಲೆಗೆಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

- Advertisement - 

ಮೃತನ ಪತ್ನಿ ಚಿತ್ತಮ್ಮ ಪೊಲೀಸರಿಗೆ ದೂರು ನೀಡಿ, ನನ್ನ ಗಂಡ ಸಾವಿಗೆ ಕಾರಣರಾದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ. ಪಿಎಸ್‌ಐ ಜೆ.ಶಿವರಾಜ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";