ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಬಿಜೆಪಿ-ಜೆಡಿಎಸ್ ನಿಯೋಗ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಚಿವ ಮಿತ್ರರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ
ಅವರೊಂದಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕರ್ನಾಟಕದ ಸಂಸದರ ನಿಯೋಗವು ಭೇಟಿ‌ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.

ನಾನಾ ಕಾರಣಗಳಿಂದ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ ಕೃಷಿ ಸಚಿವರ ಗಮನ ಸೆಳೆಯಲಾಯಿತು. ಕೃಷಿ ಸಚಿವರು ನಿಯೋಗದ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬೆಳೆಗಾರರ ಸಮಸ್ಯೆಗಳನ್ನು ನಿರ್ಧಿಷ್ಟ ಕಾಲಾವಧಿಯಲ್ಲಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ,  ಬಿ.ವೈ.ರಾಘವೇಂದ್ರ, ಶ್ರೀನಿವಾಸ ಪೂಜಾರಿ, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪ್ರಭಾ ಮಲ್ಲಿಕಾರ್ಜುನ, ಬ್ರಿಜೇಶ್ ಚೌಟ ಹಾಗೂ ಮಾಜಿ ಸಚಿವ  ಆರಗ ಜ್ಞಾನೇಂದ್ರ ಮತ್ತು ಕ್ಯಾಂಪ್ಕೋ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

 

- Advertisement - 

 

Share This Article
error: Content is protected !!
";