ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಎಸ್ ಟಿ ವ್ಯಾಪ್ತಿಗೆ ಒಳಪಡದಿರುವ ಬೇಕರಿ, ಕಾಂಡಿಮೆಂಟ್ಸ್ ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯು ನೋಟೀಸ್ ನೀಡುವುದರ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ಸಣ್ಣ ವ್ಯಾಪಾರಿಗಳ ಹಿತರಕ್ಷಣೆಗಾಗಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು.
ಸಮಸ್ಯೆಗಳಿದ್ದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ – 8884245123 ಕ್ಕೆ ಸಂಪರ್ಕಿಸಲು ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
ರಾಜ್ಯದ ಬೊಕ್ಕಸ ತುಂಬಿಕೊಳ್ಳಲು ಸಣ್ಣ ವ್ಯಾಪಾರಿಗಳ ನೆಮ್ಮದಿ ಕೆಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾವು ಸದಾ ಹೋರಾಡಲಿದ್ದೇವೆ ಎಂದು ಅವರು ಎಚ್ಚರಿಸಿದ್ದಾರೆ.