ಗಣೇಶ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್​ ರಶ್​ ಇರುತ್ತವೆ-ಆಂಜನೇಯ ವ್ಯಂಗ್ಯ

News Desk

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಮಾಜಿ ಸಚಿವ ಹೆಚ್​. ಆಂಜನೇಯ ಅವರು ಬೆಂಗಳೂರು ಏರ್​ಪೋರ್ಟ್​ನಲ್ಲಿ ಮುಸ್ಲಿಂರು ನಮಾಜ್​ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ಹಿಂದೂ ಹಬ್ಬಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ ನೀವೆಲ್ಲರೂ ಕಲಿತುಕೊಳ್ಳಿ ಎಂದು ಆರ್ ಎಸ್ಎಸ್ ಸಂಘದ ಹೆಸರೇಳದೆ ಟೀಕಾಪ್ರಹಾರ ಮಾಡಿದ ಆಂಜನೇಯ ಅವರು ಮುಂದುವರೆದು ಮಾತನಾಡಿ,

- Advertisement - 

ಇವರಂಗೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ಹಾಕಯ್ಯ ಅಂತ ಕೇಳಿಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತೇಳಿ ಅಲ್ಲಿ ನಮಾಜ್​ ಮಾಡಿರಬಹುದು ಎಂದು ಮಾಜಿ ಸಚಿವ ಆಂಜನೇಯ ಸಮರ್ಥಿಸಿಕೊಂಡಿದ್ದಾರೆ.

ಮುಸ್ಲಿಂರು ಮಾಡಿರುವ ನಮಾಜ್ ನಲ್ಲೂ ನಾವು ಸಣ್ಣತನ ತೋರಿಸಿದ್ರೆ ಹೇಗೆ? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್​ ರಶ್​ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಬದಲಾಗಿ ಹೈಕ್ಲಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳು ಹೌಸ್​ಫುಲ್​ ಆಗುತ್ತವೆ ಎಂದು ಆಂಜನೇಯ ಅವರು ನೀಡಿರುವ ಹೇಳಿಕೆಯಿಂದ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

- Advertisement - 

 

 

Share This Article
error: Content is protected !!
";