ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟ ಗ್ರಾಮದ ಮಹಿಳೆಯೊಬ್ಬರು ಕುರಿ ಸಾಕಾಣಿಕೆ ಮಾಡಿ ಇದರಿಂದ ಬಂದ ಲಾಭದಲ್ಲಿ ತಮ್ಮ ಜೀವನ ನಡೆಸುತ್ತಿದ್ದರು.
ಯಾರೋ ಅಪರಿಚಿತರು ಈ ಮಹಿಳೆಯಿಂದ ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೀಡಿ ಪರಾರಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಖೋಟಾ ನೋಟು ಜನರ ಕೈಯಲ್ಲಿ ಹರಿದಾಡುತ್ತಿವೆ.
ಕಡೂರು ತಾಲೂಕಿನ ನಿಡಘಟ್ಟ ಗ್ರಾಮದ ಹೇಮಾವತಿ ಎಂಬವರ ಬಳಿ ಅಪರಿಚಿತರು ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೋಟು ನೀಡಿದ್ದಾರೆ. ಕುರಿಗಳನ್ನು ಮಾರಿ ಬಂದ ಹಣವನ್ನು ಹೇಮಾವತಿಯವರು ಎಸ್ಬಿಐ ಬ್ಯಾಂಕ್ನಲ್ಲಿರುವ ತಮ್ಮ ಖಾತೆಗೆ ಜಮೆ ಮಾಡಲು ಹೋಗಿದ್ದಾಗ ಖೋಟಾ ನೋಟು ಎಂದು ತಿಳಿದಿದ್ದು ಅವರು ಆತಂಕಕ್ಕೆ ಒಳಗಾಗಿದ್ದಾರೆ.
ಹೇಮಾವತಿ ಅವರು 25 ಸಾವಿರ ರೂಪಾಯಿಗೆ ಕುರಿಗಳನ್ನು ಮಾರಿದ್ದರು. ಈ ಹಣವನ್ನು ಹೇಮಾವತಿಯವರು ಬ್ಯಾಂಕ್ಗೆ ಜಮೆ ಮಾಡಲು ತೆರಳಿದ್ದಾರೆ. ಈ 25 ಸಾವಿರ ರೂಪಾಯಿಯಲ್ಲಿ 14 ಸಾವಿರ ರೂಪಾಯಿಯಷ್ಟು ನೋಟುಗಳು ಖೋಟಾ ಆಗಿವೆ. 500 ರೂ. ಮುಖಬೆಲೆಯ 28 ನೋಟುಗಳು ನಕಲಿ ಎಂದು ಬ್ಯಾಂಕ್ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ.