ಬೀದಿ ಬದಿ ವ್ಯಾಪಾರಸ್ಥರಿಂದ ದಿನ ವಹಿ ಸುಂಕ ವಸೂಲಿ ರದ್ದು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ವ್ಯಾಪ್ತಿ  ಬೀದಿ ಬದಿ ವ್ಯಾಪಾರಿಗಳ ಹಿತದೃಷ್ಠಿಯಿಂದ 2025 ಮಾರ್ಚ್ 10 ರಿಂದ ಬೀದಿ ಬದಿ ವ್ಯಾಪಾರಸ್ಥರಿಂದ ದಿನ ವಹಿ ಸುಂಕ ವಸೂಲಿ ಮಾಡುವುದನ್ನು ರದ್ದುಪಡಿಸಲಾಗಿರುತ್ತದೆ.

ಇನ್ನೂ ಮುಂದೆ ಗುತ್ತಿಗೆದಾರರು ಮತ್ತು ಅನಧಿಕೃತ ವ್ಯಕ್ತಿಗಳು ಬೀದಿ ಬದಿ  ವ್ಯಾಪಾರಸ್ಥರ ಬಳಿ ಬಂದು ಸುಂಕ ಕೇಳಿದ್ದಲ್ಲಿ ಕೂಡಲೇ ನಗರಸಭೆಗೆ ದೂರು ನೀಡಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

 

Share This Article
error: Content is protected !!
";