India News

ವೀರೇಂದ್ರ ಪಪ್ಪಿ ಸೇರಿದಂತೆ ಯಾರೇ ತಪ್ಪು ಮಾಡಲಿ ಶಿಕ್ಷೆ ಆಗುತ್ತೆ

ಚಂದ್ರವಳ್ಳಿ ನ್ಯೂಸ್, ರಾಯಚೂರು: ಕಾನೂನು ಬಾಹಿರ ಕೃತ್ಯ ಎಸಗಿದವರು ಯಾರೇ ಇರಲಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ ಎಂದು ಸಣ್ಣ‌ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ‌‌ ಬಳಿಕ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಪ್ರತ್ಯೇಕ 3 ಎಫ್ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ‌

ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ಈ ಮೂರು ಕ್ಷೇತ್ರಗಳನ್ನ ಜೆಡಿಎಸ್ ಪಕ್ಷಕ್ಕೆ ಕೇಳುತ್ತೇವೆ-ರವೀಂದ್ರಪ್ಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.‌ಈ‌‌ನಡುವೆ ಜೆಡಿಎಸ್ ಪಕ್ಷ 25

“ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?”  ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ…

ಬೇತೂರು ಪಾಳ್ಯ ರಾಜು ಇಂದಿನಿಂದ ಡಾ.ರಾಜ್!?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ

Lasted India News

ಪ್ರಮುಖ 2 ನಿರ್ಣಯ ತೆಗೆದುಕೊಂಡ ಸಿಡಬ್ಲ್ಯುಸಿ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ

ಕಾಣೆಯಾಗಿದ್ದ ಮಹಿಳೆ 23 ವರ್ಷಗಳ ನಂತರ ಕುಟುಂಬಕ್ಕೆ ಸೇರ್ಪಡೆ

ಚಂದ್ರವಳ್ಳಿನ್ಯೂಸ್, ಬೆಂಗಳೂರು:  ಸುಮಾರು 23 ವರ್ಷಗಳ ಹಿಂದೆ ಕಾಣೆಯಾಗಿದ್ದ, ಬಳ್ಳಾರಿ ಜಿಲ್ಲೆಯ (ವಿಜಯನಗರ) ಹೊಸಪೇಟೆಯ ದಣನಾಯಕನಕೆರೆಯ ಸಾಕಮ್ಮ ಅವರು ಕುಟುಂಬಕ್ಕೆ ಸೇರ್ಪಡೆಯಾಗಲು ಕಾರಣರಾದ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್. ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದ ವಿಜಯಕುಮಾರ ಜಿ., ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ ತಂಡದವರನ್ನು ಹಾಗೂ ಕಾಣೆಯಾಗಿದ್ದ ಮಹಿಳೆ ಸಾಕಮ್ಮ ಅವರನ್ನು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಅಭಿನಂದಿಸಿದರು.                 ಬೆಂಗಳೂರು ನಗರದ, ಶಿವಾನಂದ ವೃತ್ತದ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿ, ಕಾಣೆಯಾಗಿದ್ದ ಮಹಿಳೆ ಹಾಗೂ ಇತರರನ್ನು ಅಭಿನಂದಿಸಿ, ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಹಸ್ತಾಂತರಿಸಿದರು.ಕಾಣೆಯಾಗಿದ್ದ 50 ವರ್ಷದ ಮಹಿಳೆ ಸಾಕಮ್ಮ ಅವರು ಹಲವು ವರ್ಷಗಳ ನಂತರ ಆಕೆಯ ಕುಟುಂಬವನ್ನು ಸುರಕ್ಷಿತವಾಗಿ ಸೇರಿರುವುದು ಸಂಭ್ರಮದ ವಿಷಯವಾಗಿದೆ. ಈ ಘಟನೆಯು ಸಲ್ಮಾನ್ ಖಾನ್ ಅವರ ಭಜರಂಗಿ ಭಾಯಿಜಾನ್ ಸಿನಿಮಾವನ್ನು ನೆನಪಿಸುತ್ತಿದೆ ಹಾಗೂ ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮದ ಉತ್ತಮ ಬಳಕೆಯು ಶ್ಲಾಘನೀಯವಾದುದು ಎಂದರು.                 ಮಹಿಳೆಯು ಸುಮಾರು 23 ವರ್ಷಗಳ ಹಿಂದೆ ತನ್ನ ಕುಟುಂಬ ತೊರೆದು ಕಾಣೆಯಾಗಿರುತ್ತಾರೆ. ನಂತರ ಸುಮಾರು ಎರಡು ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ, ಕುಟುಂಬದವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂಬ ವಿಚಾರವನ್ನು ಕರ್ನಾಟಕ ಮೂಲದವರಾದ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ಜಿ. ಎಂಬುವರು ಈ ವಿಷಯವನ್ನು 2024 ರ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಅದರಂತೆ ಪ್ರಧಾನ ಕಾರ್ಯದರ್ಶಿಯವರು ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಟ್ಯಾಗ್ ಮಾಡಿ ಮಹಿಳೆಯನ್ನು ಮರಳಿ ಕರ್ನಾಟಕಕ್ಕೆ ಕರೆತರುವ ನಿಟ್ಟಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದರು.                 ಸಾಕಮ್ಮನವರ ವಿಷಯವು ನನ್ನ ಗಮನಕ್ಕೆ ಬರುತ್ತಿದ್ದಂತೆ ಅವರನ್ನು ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ, ಅಧಿಕಾರಿಗಳ ತಂಡವನ್ನು ವಿಮಾನದ ಮೂಲಕ ಕಳುಹಿಸಿ ಸಾಕಮ್ಮನವರನ್ನು ವಿಮಾನದಲ್ಲೇ ಸುರಕ್ಷಿತವಾಗಿ ಕರೆತರುವಂತೆ ಆದೇಶಿಸಿದೆ ಎಂದು ತಿಳಿಸಿದ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರಿಗೆ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರೊಂದಿಗೆ ಉತ್ತಮ ಓಡನಾಟ ಇದ್ದುರಿಂದ ಅವರನ್ನು ಸಂಪರ್ಕಿಸಿ ಈ ವಿಚಾರವನ್ನು ಮುಂದಿನ ಕ್ರಮಕ್ಕಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಹಾಯವಾಣಿಗೆ ಅನುಕೂಲವಾಗುವಂತೆ ಅಗತ್ಯ ನಿರ್ದೇಶನಗಳನ್ನು ನೀಡಿದರು.                 ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯು ಈ ಕುರಿತು ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ನಾಗೇಶ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರನ್ನು ಸಂರ್ಪಕಿಸಿತು. ಎರಡು ಜಿಲ್ಲೆಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಅವರೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಅವರ ನಿರ್ದೇಶನದಂತೆ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧೀಕ್ಷಕ ಬಸವರಾಜ, ಬಳ್ಳಾರಿ ಜಿಲ್ಲೆಯ ಎನ್.ಪಿ.ಕೆ ಕೇಂದ್ರದ ವಾರ್ಡನ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಭಾರತಿಯವರು ಕಾರ್ಯಾಚರಣೆ ತಂಡದಲ್ಲಿ ಇದ್ದರು ಎಂದು ತಿಳಿಸಿದರು.                 ಈ ತಂಡವು 2024 ರ ಡಿಸೆಂಬರ್ 21 ರಂದು ಚಂಡೀಗಢವನ್ನು ತಲುಪಿ, ನಂತರ ಸಾಕಮ್ಮ ಅವರು ಇದ್ದ ಹಿಮಾಚಲ ಪ್ರದೇಶದ ಮಂಡಿ ಜಲ್ಲೆಯ ಬಾಲ್‌ವಲಿ ಕಲ್ಯಾಣ ಸಭಾ (ವೃದ್ದಾಶ್ರಮ)ವನ್ನು ತಲುಪಿದರು. ಸಾಕಮ್ಮ ಅವರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ವೀಡಿಯೋ ಕರೆ ಮೂಲಕ ಸಾಕಮ್ಮ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು.  ಈ ವೇಳೆ ಆಕೆಗೆ 3 ಮಕ್ಕಳಿದ್ದು, ಅವರು ತಮ್ಮ ತಾಯಿಯನ್ನು ಸ್ವೀಕರಿಸಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡು ವಿಡಿಯೋ ಮೂಲಕ ಮಾಹಿತಿ ನೀಡಿದರು. ಮರುದಿನ ಸಾಕಮ್ಮ ಅವರನ್ನು ನಮ್ಮ ಅಧಿಕಾರಿಗಳಿಗೆ ಬಾಲ್ ಕಣಿವೆ ಮ್ಯಾಜಿಸ್ಟ್ರೇಟ್ ಉಪ ವಿಭಾಗ ಸ್ಮೃತಿಕಾ ನೇಗಿ ಹಾಗೂ ಧರಮ್ ಶೀಲಾ ಅವರು ಮಹಿಳೆಯ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿದರು.  ಸಾಕಮ್ಮನವರು 2024 ರ ಡಿಸೆಂಬರ್ 24 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ತಂಡದೊಂದಿಗೆ ಚಂಢೀಗಢ ವಿಮಾನ ನಿಲ್ದಾಣವನ್ನು ತಲುಪಿದ ನಂತರ ರಾತ್ರಿ 08.30ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಿದರು ಎಂದು ಸಚಿವರು ಘಟನೆಯನ್ನು ವಿವರಿಸಿದರು. ಇಂದು ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಒಪ್ಪಿಸಲಾಗಿದೆ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿ. ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಿ.ಟಿ.ರವಿ ಅವರ ಬಂಧನ ವೇಳೆ ಕರ್ತವ್ಯಲೋಪ ಎಸಗಿದ ಸಿಪಿಐ ಅಮಾನತು

ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಬಂಧನ ವೇಳೆ ಕರ್ತವ್ಯಲೋಪ ಆರೋಪದಡಿ ಖಾನಾಪುರ ಸಿಪಿಐ ಮಂಜುನಾಥ್​ ನಾಯ್ಕ ಅವರನ್ನು ಅಮಾನತುಗೊಳಿಸಿ ಐಜಿಪಿ ವಿಕಾಶ್​

ಕಾಂಗ್ರೆಸ್ ವತಿಯಿಂದ ಡಿ.27ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಕಾಂಗ್ರೆಸ್ ವತಿಯಿಂದ ಡಿ.27ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು

ಮೆಳೆಕೋಟೆ, ಹೇರೂರು ಬ್ಯಾರೇಜ್ ಭರ್ತಿ, ಬಾಗಿನ ಅರ್ಪಿಸಿದ ಜಯಚಂದ್ರ

ಚಂದ್ರವಳ್ಳಿ ನ್ಯೂಸ್, ಶಿರಾ: ಮೆಳೆಕೋಟೆ, ಹೇರೂರು ಮತ್ತು ನಾರಾಯಣಪುರ ಬ್ಯಾರೇಜ್ ಗಳು ಹೇಮಾವತಿ ನೀರಿನಿಂದ ತುಂಬಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರು‌, ಕಾರ್ಯಕರ್ತರ ಜೊತೆಗೂಡಿ ಶಾಸಕರು ಹಾಗೂ

ಶಾಸಕ ಮುನಿರತ್ನ ಅವರ ಮೇಲಿನ ಹಲ್ಲೆಗೆ ಖಂಡನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಂಡಿರುವ ಗೂಂಡಾಗಳು ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಬಿಜೆಪಿ

ಚಿನ್ನದ ಗಣಿಗಾರಿಕೆ ಪುನರಾರಂಭಿಸಲು ಕೇಂದ್ರ ಸಚಿವ ಕುಮಾರಸ್ವಾಮಿ, ಜಿ. ಕಿಶನ್ ರೆಡ್ಡಿ ಸ್ಪಂದನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಇಂಗಳದಾಳಿನಿಂದ ಈ ಹಿಂದೆ ಕೈಗೊಳ್ಳಲಾಗುತ್ತಿದ್ದ ಚಿನ್ನದ ಗಣಿಗಾರಿಕೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ

ಮಕ್ಕಳ ರಕ್ಷಣಾ ನೀತಿ ಕುರಿತು ತರಬೇತಿ ಕಾರ್ಯಗಾರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು

error: Content is protected !!
";