Technology News

  ಸಿಜೇರಿಯನ್  ಹೆರಿಗೆ ತಡೆಗಟ್ಟಲು ವಿಶೇಷ ಕಾರ್ಯಕ್ರಮ:ಸಚಿವ ದಿನೇಶ್ ಗುಂಡೂರಾವ್

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:   ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, ರಾಜ್ಯದಲ್ಲಿ ಅನಗತ್ಯ ಸಿಜೇರಿಯನ್ ಹೆರಿಗೆ ತಡೆಗಟ್ಟಲು   ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.  ರಾಜ್ಯದಲ್ಲಿ ಅನಗತ್ಯ ಸಿಜೇರಿಯನ್ ಹೆರಿಗೆ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ  ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು 24X7 ಪ್ರಸೂತಿ ಸೇವೆಗಳನ್ನು ನೀಡಲು ಬಲಪಡಿಸಲಾಗುತ್ತಿದೆ. ರಾತ್ರಿ ವೇಳೆಯಲ್ಲಿ ಸಹಜ ಹರಿಗೆಗಳನ್ನು ಮತ್ತು ಅವಶ್ಯವಿದ್ದಲ್ಲಿ, ಸಿಜೇರಿಯನ್ ಶಸ್ತ್ರಚಿಕಿತ್ಸೆ ನಡೆಸಲು ಅನುಕೂಲವಾಗುತ್ತಿದೆ, ಈ ಕ್ರಮದಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಶಿಫಾರಸ್ಸುಗೊಳ್ಳುವ ಸಂಖ್ಯೆಯು ಕಡಿಮೆ ಆಗಲಿದ್ದು ಅನಗತ್ಯ ಸಿಜೇರಿಯನ್ ಶಸ್ತ್ರಚಿಕಿತ್ಸೆಗೆ ಕಡಿವಾಣ ಹಾಕಲಾಗುತ್ತಿದೆ ಎಂದರು.   ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದ್ದು, ಇದುವರೆಗೂ 88 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಮಂಜೂರಾಗಿದ್ದು ಅದರಲ್ಲಿ 60 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿರುತ್ತವೆ. 24X7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಿಬ್ಬಂದಿಯು ಮತ್ತು ನುರಿತ ತಾಯಿ ಮತ್ತು ಮಕ್ಕಳ ತಜ್ಞರು ಇರುವುದರಿಂದ 24X7 ಸಹಜ ಹರಿಗೆ ನಡೆಸಲು ಉತ್ತೇಜಿಸಲಾಗುತ್ತಿದೆ.  ಸಹಜ ಹೆರಿಗೆಗಳನ್ನು ಹೆಚ್ಚಿಸಲು ಹಾಗೂ ಸಿಜೆರಿಯನ್ ಶಸ್ತ್ರಚಿಕಿತ್ಸೆ ಕಡಿಮೆ ಮಾಡಲು Midwifery ಯೋಜನೆಯನ್ನು ಪ್ರಾರಂಭಿಸಲಾಗಿದೆ ಈ ಯೋಜನೆಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು Midwifery ಯೋಜನೆಯಲ್ಲಿ ಪಡೆದು MLCU ಹರಿಗೆ ಕೋಣೆಯಲ್ಲಿ ಸಹಜ ಹೆರಿಗೆಗಳನ್ನು ನೆರವೇರಿಸಲು ತಜ್ಞತೆಯನ್ನು ಹೊಂದಿರುತ್ತಾರೆ.   ಪ್ರಸ್ತುತ ತರಬೇತುದಾರರ ತರಬೇತಿಯನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮತ್ತು ಹೈದರಬಾದಿನ Fernandez Foundation ನಲ್ಲಿ ಪೂರ್ಣಗೊಳಿಸಿ ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು ನೀಡುತ್ತಿದ್ದಾರೆ.  ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ 1830 ಶುಶ್ರೂಷಾಧಿಕಾರಿಗಳ ತರಬೇತಿಯಲ್ಲಿ 12 ತಿಂಗಳು ಪೂರ್ಣಗೊಂಡಿದ್ದು ಇನ್ನು 6 ತಿಂಗಳಲ್ಲಿ ತರಬೇತಿ ಮುಗಿಯಲಿದ್ದು ಜುಲೈ-2025 ರಿಂದ ಹಾಸನ, ಮಂಡ್ಯ ಮತ್ತು ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ MLCU ಕಾರ್ಯಾರಂಭ ಮಾಡಲಿದೆ.   ಬೆಂಗಳೂರಿನಲ್ಲಿ ವಾಣಿ ವಿಲಾಸ ಆಸ್ಪತ್ರೆ ಯಲ್ಲಿ ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 25 ಶುಶ್ರೂಷಾಧಿಕಾರಿಗಳು NPM ತರಬೇತಿಯನ್ನು ಜುಲೈ-2024 ರಲ್ಲಿ ಪ್ರಾರಂಭಿಸಲಾಗಿದ್ದು, ಡಿಸೆಂಬರ್ 2025 ರ ವರೆಗೆ 18 ತಿಂಗಳ ತರಬೇತಿಯು ಮುಗಿಯಲಿದ್ದು ತದ ನಂತರ ಕೋಲಾರ, ಬೆಂಗಳೂರು, ದಾವಣಗೆರೆ ಮತ್ತು ತುಮಕೂರು ಜಿಲ್ಲಾ ಆಸ್ಪತ್ರೆಗಳಲ್ಲಿ MLCU ಪ್ರಾರಂಭಗೊಳ್ಳುತ್ತದೆ.  ಬೆಳಗಾವಿ ಜಿಲ್ಲೆಯಲ್ಲಿ 18 ತಿಂಗಳ ತರಬೇತಿ ಪ್ರಾರಂಭಿಸಲಾಗಿದ್ದು ಒಟ್ಟು 24 ಶುಶ್ರೂಷಾಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ತದನಂತರ ಬೆಳಗಾವಿ, ಹುಬ್ಬಳ್ಳಿ ಮತ್ತು ಗಂಗಾವತಿ ಯಲ್ಲಿ MLCU ಪ್ರಾರಂಭಗೊಳ್ಳಲಿದೆ.  ಪ್ರತಿ ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಸಿಜೇರಿಯನ್  ಶಸ್ತ್ರಚಿಕಿತ್ಸೆಯ ಕಡಿವಾಣ ಹಾಕಲು ಸಿಜೇರಿಯನ್  ಆಡಿಟ್ ಅಸ್ಪತ್ರೆಯಲ್ಲಿ ಮಾಡಲಾಗುತ್ತಿದೆ. ಈ ಆಡಿಟ್ ನಿಂದ ಪ್ರತಿ ಸಿಜೇರಿಯನ್  ಶಸ್ತ್ರಚಿಕಿತ್ಸೆ ಅಗತ್ಯತೆ ಹಾಗು ಅನಗತ್ಯತೆ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಸಿಜೇರಿಯನ್  ಶಸ್ತ್ರಚಿಕಿತ್ಸೆ ತಡೆಗಟ್ಟಲು ಕ್ರಮವಹಿಸಲಾಗುತ್ತಿದೆ ಎಂದರು.   ಪ್ರತಿ ತಿಂಗಳು ಸಿಜೇರಿಯನ್  ಶಸ್ತ್ರಚಿಕಿತ್ಸೆಯ ಅನಗತ್ಯ ಶಸ್ತ್ರಚಿಕಿತ್ಸೆ ತಡೆಯಲು ಜಿಲ್ಲಾ ಮಟ್ಟದಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ.   ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಸೂತಿ ತಜ್ಞರುಗಳಿಗೆ ಮತ್ತು ಶುಶ್ರೂಷಕರುಗಳಿಗೆ ಹೆರಿಗೆ ಸಮಯದಲ್ಲಿನ ಆರೈಕೆ ಮತ್ತು ಪ್ರಸವದ ನಂತರದ ಆರೈಕೆಗೆ ಸಂಬಂಧಿಸಿದ ಕೌಶಲವನ್ನು ಹೆಚ್ಚಿಸಲು 3 ದಿನಗಳ ದಕ್ಷತಾ ತರಬೇತಿಯನ್ನು 2018 ರಿಂದ ನೀಡಲಾಗುತ್ತಿದೆ. ಇದರಿಂದ ಸಿಜೇರಿಯನ್ ಶಸ್ತ್ರಚಿಕಿತ್ಸೆ ಯನ್ನು ನಿಯಂತ್ರಿಸಲು ಸಹಾಯವಾಗುತ್ತಿದೆ ಎಂದು ಸಚಿವರು ತಿಳಿಸಿದರು.

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಹೆಚ್. ರಘು ಪದಗ್ರಹಣ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ  ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ  ಉಪ ಕಾರ್ಯದರ್ಶಿಗಳಾಗಿ ನೂತನವಾಗಿ ನೇಮಕವಾದ  ಎಚ್.

ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಸಂಚಾಲಕರಾಗಿ ಹಿರಿಯೂರು ಬಸವರಾಜ ನಾಯಕ ನೇಮಕ

ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಸಂಚಾಲಕರಾಗಿ ಹಿರಿಯೂರಿನ ಟಿ. ಬಸವರಾಜ ನಾಯಕ ಅವರನ್ನು

ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಪ್ರತ್ಯೇಕ 3 ಎಫ್ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ‌

ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ಈ ಮೂರು ಕ್ಷೇತ್ರಗಳನ್ನ ಜೆಡಿಎಸ್ ಪಕ್ಷಕ್ಕೆ ಕೇಳುತ್ತೇವೆ-ರವೀಂದ್ರಪ್ಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.‌ಈ‌‌ನಡುವೆ ಜೆಡಿಎಸ್ ಪಕ್ಷ 25

Lasted Technology News

ಕನಕಪುರ ಮೆಡಿಕಲ್‌ಕಾಲೇಜಿಗೆ ಅನುಮೋದನೆ-ಡಿಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತದ ಪ್ರಪ್ರಥಮ ಎಐ ಸಿಟಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 'ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ ಟೆಕ್ ಸಿಟಿ'ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಜಾಗತಿಕ ಹೂಡಿಕೆದಾರರ ವಿಶ್ವಾಸದ ನೆಲೆ ನಮ್ಮ ಕರ್ನಾಟಕ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಾಗತಿಕ ಹೂಡಿಕೆದಾರರ ವಿಶ್ವಾಸದ ನೆಲೆ – ನಮ್ಮ ಕರ್ನಾಟಕ. ನಮ್ಮ ಸರ್ಕಾರದ ಹೊಸ-ಹೊಸ ಚಿಂತನೆಗಳು ಮತ್ತು ವಿನೂತನ ಯೋಜನೆಗಳ ಪರಿಣಾಮ ಕರ್ನಾಟಕ ಕೈಗಾರಿಕಾಭಿವೃದ್ಧಿಯ

ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತೊಂದು ಪೂರಕ ಹೆಜ್ಜೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೈಗಾರಿಕಾ ಹೂಡಿಕೆಗಳಿಗೆ ಉತ್ತೇಜನ ನೀಡಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಕ್ರಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕೈಗೊಂಡಿರುವ ಪ್ರಕ್ರಿಯೆ ನಿರಂತರವಾಗಿ ಮುಂದುವರೆದಿದೆ ಎಂದು

ಬಾಹ್ಯಾಕಾಶ ಸಾಧನೆಗಳು ಯುವಜನರಿಗೆ ಸ್ಫೂರ್ತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: "2023 ರ ಆಗಸ್ಟ್ 23 ರಂದು ಭಾರತದ ಹೆಮ್ಮೆಯ ಚಂದ್ರಯಾನ -3 ರ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ

ಬೆಂಗಳೂರಿನಲ್ಲೂ ಹೊಸ ಶಾಖೆಗಳ ಆರಂಭ-ಸಚಿವ ಎಂ.ಬಿ ಪಾಟೀಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶೈಕ್ಷಣಿಕ  ಕ್ರಾಂತಿಯ ಹೊಸ ಅಧ್ಯಾಯಕ್ಕೆ BLDE ಸಜ್ಜು! ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳು | ಬೆಂಗಳೂರಿನಲ್ಲೂ ಹೊಸ ಶಾಖೆಗಳ ಆರಂಭ ಆಗಲಿವೆ ಎಂದು

ದಾವಣಗೆರೆಗೆ ಐಟಿಬಿಟಿ ಕಂಪನಿಗಳ ಆಗಮನ?

ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಮಧ್ಯ ಕರ್ನಾಟಕದ ದಾವಣಗೆರೆ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇನ್ನಿಲ್ಲದ ಕಸರತ್ತು ನಡೆಯುತ್ತಿದೆ. ಐಟಿ ಹಬ್ ಆಗಿ

ಸುಸ್ಥಿರ ಆರೋಗ್ಯಕ್ಕೆ ಎಲೆಕ್ಟ್ರಿಕ್ ವಾಹನಗಳು ಪರಿಹಾರ: ಸಾಲಿಯಾನ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಭಾರತದಂತಹ ಜನಸಂಖ್ಯೆ ಹೆಚ್ಚಾಗಿರುವ ದೇಶಗಳಲ್ಲಿ ಇಂಧನ ಭದ್ರತೆ, ವಾಯುಮಾಲಿನ್ಯ, ಆರ್ಥಿಕ ಸಮಸ್ಯೆ ನಿವಾರಣೆ ಮತ್ತು ಜಾಗತಿಕ ತಾಪಮಾನದಂತಹ ಸಮಸ್ಯೆಗಳನ್ನು ನಿವಾರಿಸಿ, ಸುಸ್ಥಿರ ಅಭಿವೃದ್ಧಿಯತ್ತ

ಮುಂದಿನ ಐದು ದಿನ ಭಾರೀ ಮಳೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

error: Content is protected !!
";