ವಿವಿಧ ಸೇವಾ ಕಾರ್ಯಗಳ ಮೂಲಕ ಪೂಜ್ಯ ಡಾ ವೀರೇಂದ್ರ ಹೆಗ್ಗಡೆ ಯವರ ಜನ್ಮದಿನ ಆಚರಣೆ 

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆ ನವಜೀವನ ಸಮಿತಿ ಶೌರ್ಯ ತಂಡ ದೊಡ್ಡಬಳ್ಳಾಪುರ ತಾಲೂಕು ಇವರ ಸಂಯುಕ್ತಾಶ್ರಯದಲ್ಲಿ ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ
, ದಿನಸಿ ಕಿಟ್ ವಿತರಣೆ,ಮಕ್ಕಳಿಗೆ ಪೆನ್ ಪುಸ್ತಕ ವಿತರಣೆ,ಗ್ರಾಮ ದೇವತೆ ಮುತ್ಯಾಲಮ್ಮ ದೇಗುಲ ದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ,

ಹಾಡೋನಹಳ್ಳಿ ವಲಯದ ಚೌಡೇಶ್ವರಿ ದೇಗುಲದಲ್ಲಿ ಸಿಬ್ಬಂದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು,ಮದುರೆ ಶನೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಮುಂತಾದ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ  ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಿಸಲಾಯಿತು.

- Advertisement - 

ಜನ ಜಾಗೃತಿ ಜಿಲ್ಲಾ ಉಪಾಧ್ಯಕ್ಷರಾದ ನಾಗೇಶ್, ಜಿಲ್ಲಾ ನಿರ್ದೇಶಕರಾದ ಉಮಾರಬ್ಬ,ಮಾಜಿ ತಾ.ಪ.ಅಧ್ಯಕ್ಷರಾದ ಕೃಷ್ಣಮೂರ್ತಿ,ಧರ್ಮೆಂದ್ರ,ಮಮಮತ, ಪುಷ್ಪ,ವಾಣಿ, ರಮೇಶ್ ತಾಲೂಕು ಯೋಜನಾಧಿಕಾರಿಗಳಾದ ದಿನೇಶ್ ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಕಛೇರಿ ಸಿಬ್ಬಂದಿಗಳು ತಾಲೂಕಿನ ಸೇವಾಪ್ರತಿನಿದಿಗಳು ಶೌರ್ಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";