ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರ ಮತ್ತು ತಾಲೂಕಿನ ಚಂದ್ರವಳ್ಳಿ ಪತ್ರಿಕೆ ವಿತರಕರು ಮತ್ತು ವರದಿಗಾರರಾದ ಮಲ್ಲಪ್ಪನಹಳ್ಳಿಯ ಎಂ.ಎಲ್.ಗಿರಿಧರ ಇವರ ಪುತ್ರಿ ನಂದಿತಾ ಜಿ.ಆರ್ ಇವರು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಕೀರ್ತಿ ತಂದಿದ್ದಾರೆ.
ಹಿರಿಯೂರು ನಗರದ ನೆಹರೂ ಮೈದಾನದಲ್ಲಿರುವ ವಾಣಿ ವಿಲಾಸ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿದ್ದ ಜಿ.ಆರ್.ನಂದಿತಾ ಅವರು 625 ಅಂಕಗಳಿಗೆ 603 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
ಕನ್ನಡ ಪತ್ರಿಕೆಯಲ್ಲಿ 125, ಹಿಂದಿ-100 ಪತ್ರಿಕೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ಇಂಗ್ಲೀಷ್-84, ಗಣಿತ-98, ವಿಜ್ಞಾನ-98, ಸಮಾಜ ವಿಜ್ಞಾನ-98 ಅಂಕಗಳನ್ನು ಪಡೆದಿದ್ದಾರೆ.
ಚಂದ್ರವಳ್ಳಿ ಪ್ರಾದೇಶಿಕ ದಿನ ಪತ್ರಿಕೆಯ ಹಿರಿಯೂರು ತಾಲೂಕಿನ ಪ್ರತಿನಿಧಿ ಮತ್ತು ವರದಿಗಾರರಾದ ಎಂ.ಎಲ್.ಗಿರಿಧರ ಮತ್ತು ರೂಪಾ ಅವರ ಪುತ್ರಿ ನಂದಿತಾ ಅವರ ಸಾಧನೆಗೆ ಚಂದ್ರವಳ್ಳಿ ಪತ್ರಿಕೆ ವತಿಯಿಂದ ನಗದು ಬಹುಮಾನದೊಂದಿಗೆ ಅಭಿನಂದನೆಗಳನ್ನು ಸಲ್ಲಿಸಿದೆ.