ಸಿಟಿ ರೌಂಡ್ಸ್ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹೆಬ್ಬಾಳದ ಬಳಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಹಾಗೆಯೇ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಈ ವೇಳೆ ಬಿಡಿಎ ಅಧ್ಯಕ್ಷರಾದ ಹ್ಯಾರಿಷ್ ಅವರು ಉಪಸ್ಥಿತರಿದ್ದರು.

- Advertisement - 

 ಜೆಪಿನಗರ 4ನೇ ಹಂತದಿಂದ -ಕೆಂಪಾಪುರ ಸಂಪರ್ಕಿಸುವ ನೂತನ ಮೆಟ್ರೋ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಯೋಜನೆಯ ನೀಲನಕ್ಷೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಡಿಸಿಎಂ ನೀಡಿದರು. 

- Advertisement - 

 ಸುಮನಹಳ್ಳಿ ಹಾಗೂ ಮೈಸೂರು ರಸ್ತೆ ಜಂಕ್ಷನ್‌ಬಳಿ ಬಿಎಂಆರ್‌ಸಿಎಲ್‌ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸಂಬಂಧ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ನೀಡಿದರು.

 

 

Share This Article
error: Content is protected !!
";