ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಬಾಂಗ್ಲಾ ವಲಸಿಗರಿಗೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಜನ್ನತ್ ಆಗಿ ಮಾರ್ಪಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದರು.
ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಹುಡುಕಿ ಅವರನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರ ಏಕೆ ಧೈರ್ಯ ತೋರುತ್ತಿಲ್ಲ? ಅಕ್ರಮ ಬಾಂಗ್ಲಾ ನಿವಾಸಿಗಳ ವಿಷಯದಲ್ಲೇಕೆ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಡಿಸಿಎಂ ಸಿದ್ದರಾಮಯ್ಯ ಅವರು ಮೌನವ್ರತಕ್ಕೆ ಶರಣಾಗಿದ್ದಾರೆ..??
ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರನ್ನು ರಕ್ಷಿಸುತ್ತಿದೆಯೇ? ಅಕ್ರಮ ಬಾಂಗ್ಲಾ ವಲಸಿಗರನ್ನು ಕೂಡಾ ಕಾಂಗ್ರೆಸ್ ಪಕ್ಷ ಮತಬ್ಯಾಂಕ್ ಎಂದು ಪರಿಗಣಿಸಿದೆಯೇ? ಎಂದು ಅಶೋಕ್ ಟೀಕಾಪ್ರಹಾರ ಮಾಡಿದರು.

