ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಎಂಎಫ್ ಅಧ್ಯಕ್ಷ ಗಾದಿಗೆ ಒಂದು ಕಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಬಣ ಕಣ್ಣಿಟ್ಟಿದೆ. ಕಾಂಗ್ರೆಸ್ ಒಳಜಗಳ ಇದೀಗ ಮತ್ತೊಮ್ಮೆ ಬೀದಿಗೆ ಬರಲು ವೇದಿಕೆ ಸಿದ್ಧವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸಹೋದರನಿಗೆ ಕೆಎಂಎಫ್ ಪಟ್ಟ ಕಟ್ಟಲು ಡಿಕೆಶಿ ತೆರೆಮರೆಯ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಬಣ ಬಡಿದಾಟ ಇದಕ್ಕೆ ಅಡ್ಡಿಯಾಗುವ ಲಕ್ಷಣಗಳು ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಿಕೆಶಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ.
ಸಿದ್ದು ಮತ್ತು ಡಿಕೆಶಿ ಬಣ ಬಡಿದಾಟದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

