ಇಂದಿರಾ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಊಟ, ತಿಂಡಿ ನೀಡಲು ಸಿಎಂ ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯ ತಿಪಟೂರಿನ ಸರ್ಕಾರಿ ಬಸ್‌ ನಿಲ್ದಾಣದ ಬಳಿಯಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಗುಣಮಟ್ಟದ ಊಟ
, ತಿಂಡಿಯನ್ನು ಪೂರೈಕೆ ಮಾಡಲಾಗುತ್ತಿದ್ದು, ಸ್ವಚ್ಛತೆಯೇ ಮರಿಚೀಕೆಯಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

- Advertisement - 

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ನೀಡಿ, ಅದರಂತೆ, ಸದರಿ ನಗರಸಭೆಯ ಇಂದಿರಾ ಕ್ಯಾಂಟೀನ್‌ ಅನ್ನು ಪ್ರತಿದಿನ ಪರಿಶೀಲನೆ ಮಾಡಲಾಗುತ್ತಿದ್ದು, ಕ್ಯಾಂಟೀನ್‌ ಆವರಣ, ಶೌಚಾಲಯದ ಸ್ವಚ್ಛತೆಯನ್ನು ಮಾಡಲು ನಗರಸಭೆಯ ಪೌರ ಕಾರ್ಮಿಕರನ್ನು ಈಗಾಗಲೇ ನೇಮಕ ಮಾಡಲಾಗಿರುತ್ತದೆ. ಮುಂದುವರೆದು ಗುಣಮಟ್ಟದ ಊಟ-ಉಪಹಾರಗಳನ್ನು ನೀಡಲಾಗುತ್ತಿದ್ದು, ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಇನ್ನು ಮುಂದೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಲಾಗುವುದು ಎಂದು ತಿಪಟೂರು ನಗರಸಭೆಯ ಪೌರಾಯುಕ್ತರರು ತಿಳಿಸಿದ್ದಾರೆ.

- Advertisement - 

ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.

- Advertisement - 
Share This Article
error: Content is protected !!
";