ದೆಹಲಿ ಸ್ಫೋಟ ಪ್ರಕರಣ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ದೆಹಲಿಯ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಅವರು ಸೂಚನೆ ನೀಡಿದ್ದಾರೆ.

- Advertisement - 

ಜನನಿಬಿಡ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

 

- Advertisement - 

Share This Article
error: Content is protected !!
";