ಪತ್ರಕರ್ತನ ಕುಟುಂಬಕ್ಕೆ 2ಲಕ್ಷ ರೂ ಬಿಡುಗಡೆ ಮಾಡಿದ‌ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಪತ್ರಕರ್ತ ದಿ.ಜಯಣ್ಣ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಮೂಲದವರಾದ ಜಯಣ್ಣ ಅವರು ಕೋವಿಡ್ ನಿಂದ ಮೃತಪಟ್ಟಿದ್ದರು. ಅವರ ಕುಟುಂಬ ಆರ್ಥಿಕವಾಗಿ ಸಂಷ್ಟದಲ್ಲಿದ್ದ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪತ್ರ ಬರೆದು ಸರ್ಕಾರದ ಗಮನಕ್ಕೆ ತಂದಿದ್ದರು. ಹಾಗಾಗಿ ಬಾಕಿ ಇದ್ದ ಕಡತ ವಿಲೇವಾರಿಗೆ ಸಿಎಂ ಸೂಚಿಸಿದ್ದರು.

- Advertisement - 

ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧನ್ಯವಾದಗಳನ್ನು ಸಲ್ಲಿಸಿದೆ.

 

- Advertisement - 

 

Share This Article
error: Content is protected !!
";