ಬೆಂಗಳೂರು ನಿವಾಸಿಗಳಿಗೆ ಗುಣಮಟ್ಟದ ಸೇವೆ, ಸೌಲಭ್ಯ ಒದಗಿಸಲು ಬದ್ಧ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಆಡಳಿತ ವಿಕೇಂದ್ರೀಕರಣ ಹಾಗೂ ಆಡಳಿತಾತ್ಮಕ ಕಾರ್ಯಗಳ ಶೀಘ್ರ ಅನುಷ್ಠಾನಕ್ಕಾಗಿ ಬಿಬಿಎಂಪಿಯನ್ನು 5 ಪಾಲಿಕೆಗಳಾಗಿ ವಿಂಗಡಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರನ್ನು ಕೇಂದ್ರೀಕೃತ ಆಡಳಿತ ವ್ಯವಸ್ಥೆಯಿಂದ ವಿಕೇಂದ್ರೀಕರಣದ ಕಡೆಗೆ ಕೊಂಡೊಯ್ದು, ಬೆಂಗಳೂರು ನಗರ ನಿವಾಸಿಗಳಿಗೆ ಗುಣಮಟ್ಟದ ಸೇವೆ, ಸೌಲಭ್ಯ ಒದಗಿಸಲು ನಾವು ಬದ್ಧರಿದ್ದೇವೆ.

- Advertisement - 

ಸ್ವಾಭಿಮಾನ, ಸ್ವಾವಲಂಬನೆ ಹಾಗೂ ಘನತೆಯ ಬದುಕು ಸ್ವಾತಂತ್ರ್ಯದ ನೈಜ ಆಶಯ. ಈ ಆಶಯದ ಈಡೇರಿಕೆಗೆ ನಾವು ಪ್ರಾಮಾಣಿಕ ಶ್ರಮಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

- Advertisement - 

 

Share This Article
error: Content is protected !!
";