ಪ್ರಜಾಪ್ರಭುತ್ವ ಉಳಿಸಲು, ಮುಂದಿನ ಪೀಳಿಗೆಯ ಭವಿಷ್ಯ ರೂಪಿಸಲು ಸಮ್ಮೇಳನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸೆಪ್ಟೆಂಬರ್‌13ರವರೆಗೆ 11ನೇ ಕಾಮನ್‌ವೆಲ್ತ್‌ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನ ನಡೆಯಲಿದ್ದು, ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಈ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿಗಳು, ಉಪಸಭಾಪತಿಗಳು, ಲೋಕಸಭೆ ಹಾಗೂ ರಾಜ್ಯಸಭೆಯ ಮಹಾಕಾರ್ಯದರ್ಶಿಗಳು, ವಿಧಾನಸಭೆ

- Advertisement - 

ಹಾಗೂ ವಿಧಾನಪರಿಷತ್‌ಕಾರ್ಯದರ್ಶಿಗಳ ಜೊತೆಗೆ ಕಾಮನ್‌ವೆಲ್ತ್‌ರಾಷ್ಟ್ರಗಳ 9 ಮಂದಿ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸಲು, ಮುಂದಿನ ಪೀಳಿಗೆಯ ಭವಿಷ್ಯವನ್ನು ರೂಪಿಸಲು ಈ ಸಮ್ಮೇಳನವು ಸಹಕಾರಿಯಾಗಲಿದೆ ಎಂದು ಡಿಸಿಎಂ ತಿಳಿಸಿದರು.

 

- Advertisement - 

 

 

 

Share This Article
error: Content is protected !!
";